ಡಾ. ಬಾಬಾಸಾಹೇಬರ ಮೇರುವ್ಯಕ್ತ್ತಿತ್ವದ ಔನ್ನತ್ಯ ಹಾಗೂ ಅವರ ಜೀವನಕಾಲದ ಬಹುಮುಖ ಆಯಾಮಗಳು, ದಲಿತ ಸಮುದಾಯದ ಏಳ್ಗೆಗಾಗಿ ಅವರು ನಡೆಸಿದ್ದ ಹೋರಾಟಗಳು, ಅವರ ಚಿಂತನೆಯ ಆಳ ಮತ್ತು ವಿಸ್ತಾರ, ಸಂವಿಧಾನ ರಚನೆಯ ಭೀಮಕಾರ್ಯ ಮತ್ತು ಭೌದ್ಧಮತ ಸ್ವೀಕರಿಸಿದ ಅವರ ಯಥಾರ್ಥ ಮನೋಭೂಮಿಕೆ – ಇವುಗಳ ಆಧಾರ ಸಹಿತ ದರ್ಶನವನ್ನು ಈ ಕೃತಿಯಲ್ಲಿ ಕಾಣಬಹುದು. ಬಾಬಾಸಾಹೇಬರ ಬದುಕಿನ ಸಂಧ್ಯಾಕಾಲದ ಕೊನೆಯ ನಾಲ್ಕು ವರ್ಷಗಳಲ್ಲಿ ಅವರ ನಿಕಟ ಸಂಪರ್ಕದಲ್ಲಿದ್ದ ಅಂತರರಾಷ್ಟ್ರೀಯ ಖ್ಯಾತಿಯ ಕಾರ್ಮಿಕ ನಾಯಕ ದತ್ತೋಪಂತ ಠೇಂಗಡಿ ಅವರು, ತಮ್ಮ ಈ ಸಾಮೀಪ್ಯದ ಮತ್ತು ಸ್ವೀಯ ಪರಾಮರ್ಶನೆಯ ಆಧಾರದ ಮೇಲೆ ಮರಾಠಿಯಲ್ಲಿ ಬರೆದ ’ಸಾಮಾಜಿಕ ಕ್ರಾಂತೀಚೀ ವಾಟಚಾಲ ಆಣಿ ಡಾ|| ಅಂಬೇಡ್ಕರ್, ಪುಸ್ತಕದ ಕನ್ನಡಾನುವಾದವೇ ’ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್’. ಇದು ಡಾ|| ಬಾಬಾ ಸಾಹೇಬರ ಜೀವನ ಚರಿತ್ರೆಯಲ್ಲ; ಆದರೆ ಅವರ ವ್ಯಕ್ತಿತ್ವ ಮತ್ತು ಜೀವನಕಾರ್ಯದ ಕುರಿತ ಅಧ್ಯಯನಪೂರ್ಣ ಶಬ್ದಚಿತ್ರ. ಪರಸ್ಪರ ಭೇಟಿಯಾದಾಗಲೆಲ್ಲ ಅವರಿಬ್ಬರ ನಡುವೆ ಗಂಭೀರ ವೈಚಾರಿಕ ಸ್ತರದಲ್ಲಿ ಸಂವಾದ ನಡೆಯುತ್ತಿತ್ತು. ಈ ಸಂವಾದ-ಜಿಜ್ಞಾಸೆಗಳಿಂದ ಠೇಂಗಡಿ ಅವರ ಈ ಕೃತಿಯು ಅಂಬೇಡ್ಕರ್ ಅವರ ಚಿಂತನರೀತಿಯನ್ನೂ ವಿಶಾಲ ದೃಗ್ಭೂಮಿಕೆಯನ್ನೂ ಪ್ರಖರ ರಾಷ್ಟ್ರೀಯತಾ ನಿಷ್ಠೆಯನ್ನೂ ಆಧಾರಭೂತವಾಗಿ ಎತ್ತಿ ತೋರಿಸಿದೆ.
ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
Sale!
Rastrottana Sahitya
ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
₹500.00 Original price was: ₹500.00.₹450.00Current price is: ₹450.00.
Be the first to review “ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್” Cancel reply
Related products
-
Rastrottana Sahitya
ಸಮಾಜಕಾರ್ಯ ಸಂಹಿತೆ | ಎಸ್. ಆರ್. ರಾಮಸ್ವಾಮಿ
₹120.00Original price was: ₹120.00.₹108.00Current price is: ₹108.00. Buy Now -
Rastrottana Sahitya
Importance of Rewriting Our Distorted Indian History – By Manjunatha Ajjampura
₹100.00Original price was: ₹100.00.₹90.00Current price is: ₹90.00. Buy Now -
Rastrottana Sahitya
ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
₹300.00Original price was: ₹300.00.₹270.00Current price is: ₹270.00. Buy Now -
Rastrottana Sahitya
ಚರಿತಪಂಚಕ | ನಾರಾಯಣ ಶೇವಿರೆ
₹300.00Original price was: ₹300.00.₹240.00Current price is: ₹240.00. Buy Now





Reviews
There are no reviews yet.