ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬಕ್ಕೆ ನವೆಂಬರ್ 1 ರಂದು ಚಾಲನೆ ದೊರೆಯಿತು. ಕನ್ನಡ ಹಬ್ಬದ ಅಂಗವಾಗಿ ನಗರದ ಎನ್. ಆರ್. ಕಾಲೋನಿಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಅಂಗಳದಿಂದ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ನ ಅಂಗಳದವರೆಗೆ ತಾಯಿ ಭುವನೇಶ್ವರಿಯ ಭವ್ಯ ಶೋಭಾಯಾತ್ರೆ ಸಾಗಿ ಬಂದಿತು.






























